ಸ್ಪೋಟಕ ಸುದ್ದಿ: ಮೈತ್ರಿ ಸರ್ಕಾರದ ಪತನದ ಭೀತಿ..!!! ಉಸ್ತುವಾರಿಗಳು ಬೆಂಗಳೂರಿಗೆ ದೌಡು..!!!!


ರಾಜ್ಯ ಕಾಂಗ್ರೆಸ್​ ಉಸ್ತುವಾರಿ ಕೆ.ಸಿ. ವೇಣುಗೋಪಾಲ್​ ಅವರು ಶನಿವಾರ ಸಂಜೆ ಬೆಂಗಳೂರಿಗೆ ಆಗಮಿಸಲಿದ್ದಾರೆ. ರಾಜ್ಯದಲ್ಲಿ ಸಮ್ಮಿಶ್ರ ಸರ್ಕಾರ ಪತನವಾಗುವ ಭೀತಿ ಹಿನ್ನಲೆಯಲ್ಲಿ ಬರುತ್ತಿದ್ದಾರೆ ಎನ್ನಲಾಗಿದೆ.ರಾಜ್ಯ ಕಾಂಗ್ರೆಸ್​ನಲ್ಲಿ ಭುಗಿಲೆದ್ದಿರುವ ಭಿನ್ನಮತ ಶಮನಗೊಳಿಸುವ ಕುರಿತು ಮತ್ತು ಸಂಪುಟ ವಿಸ್ತರಣೆ ಬಗ್ಗೆ ವೇಣುಗೋಪಾಲ್​ ಕೈ ನಾಯಕರೊಂದಿಗೆ ಚರ್ಚೆ ನಡೆಸಲಿದ್ದಾರೆ ಎಂದು ತಿಳಿದು ಬಂದಿದೆ.

ಕೆ.ಸಿ. ವೇಣುಗೋಪಾಲ್​ ಗೆ ಎಐಸಿಸಿ ಅಧ್ಯಕ್ಷ ರಾಹುಲ್​ ಗಾಂಧಿ ಅವರ ಸೂಚನೆ ಮೇರೆಗೆ ವೇಣುಗೋಪಾಲ್ ರಾಜ್ಯಕ್ಕೆ ಬರುತ್ತಿದ್ದಾರೆ ಎನ್ನಲಾಗಿದೆ. ಶನಿವಾರ ತಡರಾತ್ರಿ ಕೆಪಿಸಿಸಿ ಅಧ್ಯಕ್ಷ ದಿನೇಶ್​ ಗುಂಡೂರಾವ್​ ಮತ್ತು ಉಪ ಮುಖ್ಯಮಂತ್ರಿ ಜಿ. ಪರಮೇಶ್ವರ್ ಹಾಗೂ ಜಲಸಂಪನ್ಮೂಲ ಸಚಿವ ಡಿ.ಕೆ. ಶಿವಕುಮಾರ್​ ಅವರೊಂದಿಗೆ ಚರ್ಚೆ ನಡೆಸಲಿದ್ದಾರೆ. ಭಾನುವಾರ ಯೂರೋಪ್​ ಪ್ರವಾಸ ಮುಗಿಸಿ  ವಾಪಸಾಗಲಿರುವ ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಜೊತೆಗೆ ಮಾತನಾಡಲಿದ್ದಾರೆ ಎನ್ನಲಾಗಿದೆ.

Comments